ಮೈಸೂರು: ಪ್ರಗತಿಪರ ಚಿಂತಕರು, ಹೋರಾಟಗಾರರು, ನಿವೃತ್ತ ಪ್ರಾಧ್ಯಾಪಕರು ಆದ ಡಾ. ಮಹೇಶ್ ಚಂದ್ರ ಗುರು (68) ಇಂದು ಸಂಜೆ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ 68 ವರ್ಷದ ಪ್ರೊ. ಮಹೇಶ್ ಚಂದ್ರ ಗುರು ಅವರನ್ನು ಚಿಕಿತ್ಸೆಗಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಂಜೆ 7.30 ರ ಸುಮಾರಿಗೆ ಹೃದಯಘಾತದಿಂದ ನಿಧನರಾಗಿದ್ದಾರೆ. ಮೈಸೂರು ವಿವಿ ಸೇರಿದಂತೆ ರಾಜ್ಯದ ಅನೇಕ ವಿಶ್ವವಿದ್ಯಾಲಯಗಳ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿ, ಪ್ರಾಧ್ಯಾಪಕರಾಗಿ, ಡೀನ್ ಆಗಿ ಕೆಲಸ ಮಾಡಿದ್ದ ಡಾ.ಮಹೇಶ್ ಚಂದ್ರಗುರು ಅವರು ಅಪಾರ ವಿದ್ಯಾರ್ಥಿ ಬಳಗವನ್ನು ಹೊಂದಿದ್ದರು.