ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷರಾಮಿಯಾಗಿ ಕುಳಿತು ಕಾಫಿ ಕುಡಿಯುತ್ತಿರುವ ಫೋಟೋಗಳು ವೈರಲ್ ಆಗಿವೆ. ಈ ಫೋಟೋಗಳನ್ನು ನೋಡಿದ ರೇಣುಕಾ ಸ್ವಾಮಿ ತಂದೆ ಜೈಲು ಜೈಲಾಗಿರಬೇಕು ರೆಸಾರ್ಟ್ನಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಈ ಘಟನೆ ನೋಡಿ ನನಗೆ ಹಾಗೂ ನಮ್ಮ ಕುಟುಂಬಕ್ಕೆ ತೀವ್ರ ನೋವಾಗಿದೆ. ಜೈಲಿನಲ್ಲಿ ದರ್ಶನ್ ಕುರ್ಚಿಯಲ್ಲಿ ಕುಳಿತು ಚಹಾ, ಸಿಗರೇಟ್ ಹಿಡಿದುಕೊಂಡಿದ್ದಾರೆ. ರೆಸಾರ್ಟ್ನಲ್ಲಿ ಕುಳಿತಂತೆ ಕುಳಿತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದಿದ್ದಾರೆ. ಪೊಲೀಸರ ಮೇಲೆ ನಮಗೆ ಪೂರ್ಣ ನಂಬಿಕೆ ಇದೆ ಎಂದರು.
ನನ್ನ ಮಗನಿಗೆ ಶಾಂತಿ ಸಿಗಬೇಕು ಎಂದರೆ ಕೊಲೆ ಮಾಡಿವರಿಗೆ ಶಿಕ್ಷೆಯಾಗಬೇಕು. ಸರ್ಕಾರ ನಿರ್ದಾಕ್ಷಿಣ್ಯವಾಗಿ ತನಿಖೆ ಮಾಡಬೇಕು. ಕೈಮುಗಿದು ಸರ್ಕಾರವನ್ನ ನಾನು ಕೇಳುತ್ತೇನೆ ಎಂದು ರೇಣುಕಾ ಸ್ವಾಮಿ ತಂದೆ ಶಿವನಗೌಡ ಕಣ್ಣೀರು ಹಾಕಿದರು.