ಶಿಕ್ಷಣ

ಸರ್ಕಾರಿ ಶಾಲೆಗಳ ದತ್ತು ಪಡೆಯಲು ಶಾಸಕರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪತ್ರ ಸಂದೇಶ

Share It

ಬೆಂಗಳೂರು: ಎಲ್ಲಾ ಕ್ಷೇತ್ರದ ಶಾಸಕರು ತಾವು ಪ್ರತಿನಿಧಿಸುವ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ತಲಾ ಐದು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು, ಅವುಗಳನ್ನು ಸಬಲೀಕರಣಗೊಳಿಸಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮನವಿ ಮಾಡಿದೆ.

ಈ ಬಗ್ಗೆ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದ‌ರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್, ಸಚಿವರು ಹಾಗೂ ಎಲ್ಲ ಶಾಸಕಕರಿಗೆ ಪತ್ರ ಬರೆದಿದ್ದಾರೆ. ದತ್ತು ಪಡೆದ ಶಾಲೆಗಳನ್ನು ಸಬಲೀಕರಣಗೊಳಿಸಿ, ಮಾದರಿ ಶಾಲೆಗಳನ್ನಾಗಿ ರೂಪಿಸಬೇಕು ಎಂದು ತಿಳಿಸಿದ್ದಾರೆ.

‘ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಬಲಗೊಳಿಸಿ, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಸಬಲೀಕರಣಗೊಳಿಸಲು ಪ್ರಾಧಿಕಾರವು ರಾಜ್ಯ ಸರ್ಕಾರಕ್ಕೆ ಸಲಹೆ ನೀಡುತ್ತಾ ಬಂದಿದೆ. ಆದರೂ ಒಂದೂವರೆ ದಶಕದಿಂದ ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ದುರ್ಬಲಗೊಳ್ಳುತ್ತಿದ್ದು, ಶಿಕ್ಷಣದ ಖಾಸಗೀಕರಣ ಹಾಗೂ ವ್ಯಾಪಾರೀಕರಣ ನಾಗಲೋಟದಲ್ಲಿ ಸಾಗುತ್ತಿದೆ’ ಎಂದು ಹೇಳಿದ್ದಾರೆ.

‘ದಿನದಿಂದ ದಿನಕ್ಕೆ ತೀರಾ ದುರ್ಬಲ ಸ್ಥಿತಿ ತಲುಪುತ್ತಿರುವ ಸರ್ಕಾರಿ ಶಾಲೆಗಳ ಸಬಲೀಕರಣವಾಗದ ಹೊರತು, ಉಚಿತ ಹಾಗೂ ಕಡ್ಡಾಯ ಶಿಕ್ಷಣದ ಉದ್ದೇಶ ಸಫಲವಾಗುವುದಿಲ್ಲ ಎಂದು ಹೇಳಿದರು.


Share It

You cannot copy content of this page