ಸುದ್ದಿ

ಅರಣ್ಯ ಒತ್ತುವರಿ ಸಾಬೀತು: 1 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Share It

ಶಿವಮೊಗ್ಗ: ಅರಣ್ಯ ಒತ್ತುವರಿ ಮಾಡಿದ ಪ್ರಕರಣದಲ್ಲಿ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ತಾಲೂಕಿನ ಹೊಳಲೂರು ಹೋಬಳಿ ಬಿಕ್ಕೋನಹಳ್ಳಿ ಗ್ರಾಮದ ಚಂದ್ರಪ್ಪ(50) ಎಂಬ ವ್ಯಕ್ತಿಗೆ ನ್ಯಾಯಾಲಯ 1 ವರ್ಷ ಜೈಲು ಶಿಕ್ಷೆ, 10 ಸಾವಿರ ದಂಡ ವಿಧಿಸಿ ಕರ್ನಾಟಕ ನಿಷೇಧ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಬಿಕ್ಕೋನಹಳ್ಳಿ ಗ್ರಾಮದ ಸರ್ವೆ ನಂ.9ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಶಿಕ್ಷೆಗೊಳಗಾದ ಚಂದ್ರಪ್ಪ 1.20 ಎಕರೆ ಜಮೀನು ಒತ್ತುವರಿ ಮಾಡಿದ್ದರು. ಈ ಬಗ್ಗೆ ಶಂಕರ ವಲಯ ಹೆಗ್ಗನಹಳ್ಳಿ ಶಾಖೆ ಉಪವಲಯ ಅರಣ್ಯಾಧಿಕಾರಿ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಚಂದ್ರಪ್ಪ ಅರಣ್ಯ ಭೂಮಿ ಕಬಳಿಸಿರುವುದು ಸಾಭೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿ ಆದೇಶಿಸಿದೆ.


Share It

You cannot copy content of this page