ಸುದ್ದಿ

ಹಣಕ್ಕೆ ಬೇಡಿಕೆ, ಜಾತಿ ನಿಂದನೆ ಮತ್ತು ಬೆದರಿಕೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್

Share It

ಘನತಾಜ್ಯ ವಿಲೇವಾರಿ ಗುತ್ತಿಗೆ ನೀಡಲು ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಅಡಿ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜ್ ನೀಡಿದ ದೂರು ಆಧರಿಸಿ ಮುನಿರತ್ನ, ಸರ್ಕಾರಿ ಅಧಿಕಾರಿ ವಿಜಯ್‌ಕುಮಾ‌ರ್, ಕಾರ್ಯದರ್ಶಿ ಅಭಿಷೇಕ್ ಹಾಗೂ ಶಾಸಕರ ಆಪ್ತ ವಸಂತಕುಮಾ‌ರ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾತಿ ನಿಂದನೆ ಆರೋಪದ ಅಡಿ ಇದೇ ಠಾಣೆಯಲ್ಲಿ ಶಾಸಕರ ವಿರುದ್ಧ ಮತ್ತೊಂದು ಎಫ್‌ಐಆ‌ರ್ ದಾಖಲಾಗಿದೆ. ವೇಲುನಾಯಕ್ ಎಂಬುವವರು ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.


Share It

You cannot copy content of this page